ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮನ್ಸೂರ್ ಖಾನ್ ಎಸ್ಐಟಿ ವಶಕ್ಕೆ

Update: 2019-08-02 12:12 GMT

ಬೆಂಗಳೂರು, ಅ.2: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಎಸ್ಐಟಿ ವಶಕ್ಕೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. 

ವಿಚಾರಣೆಯ ಅಗತ್ಯ ಇದೆ ಎಂದು ಎಸ್ಐಟಿ ಬಾಡಿವಾರೆಂಟ್ ಹೊರಡಿಸಿತ್ತು. ಸಿಟಿ ಸಿವಿಲ್ ನ್ಯಾಯಾಲಯವು ಈ ಆದೇಶ ನೀಡುತ್ತಿದ್ದಂತೆಯೇ ಮನ್ಸೂರ್ ಖಾನ್ ನನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆಯಷ್ಟೇ ಹೈಕೋರ್ಟ್ ಮನ್ಸೂರ್ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದ ಮನ್ಸೂರ್ ಖಾನ್, ಅನಾರೋಗ್ಯದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News