ಆ.4: ಡಬ್ಲುಪಿಐ ರಾಜ್ಯಾಧ್ಯಕ್ಷ ಮಂಗಳೂರಿಗೆ

Update: 2019-08-02 16:51 GMT

ಮಂಗಳೂರು, ಆ.2: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆ.4ರಂದು ಮಂಗಳೂರಿಗೆ ಆಗಮಿಸಿ ಪಕ್ಷದ ಹೊಣೆಗಾರರು ಸದಸ್ಯರೊಂದಿಗೆ ಸಭೆ ನಡೆಸಿ ಪಕ್ಷದ ಬೆಳವಣಿಗೆ, ಕಾರ್ಯ ಚಟುವಟಿಕೆಗಳ ಬಗ್ಗೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ಆ.4ರಂದು ದ.ಕ.ಕ್ಕೆ ಆಗಮಿಸಲಿರುವ ರಾಜ್ಯಾಧ್ಯಕ್ಷರೊಂದಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ ಸ್ಟೇಟ್‌ಬ್ಯಾಂಕ್ ಬಳಿಯ ಹ್ಯಾಮಿಲ್ಟನ್ ಕಾಂಪ್ಲೆಕ್ಸಿನಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಜಿಲ್ಲಾ ನಾಯಕರ, ಸದಸ್ಯರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News