ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಯಡಿಯೂರಪ್ಪ ಚಾಲನೆ

Update: 2019-08-03 07:24 GMT

ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು.

ಬಿಜೆಪಿ ಯುವ ಮೋರ್ಚ ಘಟಕದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ ಅವರು ಆ. 6ರಂದು ದೆಹಲಿಯಲ್ಲಿ ನಮ್ಮ ರಾಜ್ಯದ ಸಂಸದರನ್ನ ಭೇಟಿ ಮಾಡಲಿದ್ದೇನೆ, ರಾಜ್ಯಕ್ಕೆ ಬರಬೇಕಾದ ಅನುದಾನಗಳ ಕುರಿತು ಸಂಸದರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದು, ಜೊತೆಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ನಾಯಕರನ್ನ ಭೇಟಿ ಮಾಡ್ತೇನೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News