ಭಾರತ ಸೇವಾದಳದ ಸ್ವಯಂಸೇವಕರು ಶಿಸ್ತಿನ ಸಿಪಾಯಿಗಳು: ಲಾಲಾಜಿ ಮೆಂಡನ್

Update: 2019-08-03 17:01 GMT

ಶಿರ್ವ, ಆ.3: ಸ್ವಾತಂತ್ರ್ಯ ಪೂರ್ವದ ಇತಿಹಾಸ ಹೊಂದಿರುವ ಭಾರತ ಸೇವಾದಳ ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಅಪೂರ್ವ ಕೊಡುಗೆ ನೀಡಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸೇವಾದಳದ ತರಬೇತಿ ನೀಡಿದರೆ ದೇಶ ಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳಲು ಪ್ರೇರಣೆ ಯಾಗುತ್ತದೆ. ಭಾರತ ಸೇವಾದಳದ ಸ್ವಯಂಸೇವಕರು ಈ ದೇಶದ ಶಿಸ್ತಿನ ಸಿಪಾಯಿಗಳು ಎಂದು ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದ್ದಾರೆ.

ಭಾರತ ಸೇವಾದಳ ಜಿಲ್ಲಾ ಕಛೇರಿ, ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸೇವಾದಳ ಉಡುಪಿ ತಾಲೂಕು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕುತ್ಯಾರು ಶ್ರೀ ಪರಶುರಾಮೇಶ್ವರ ಕ್ಷೇತ್ರದ ಸೂರ್ಯ ಚೈತನ್ಯ ಗೋಬಲ್ ಅಕಾಡೆಮಿ ಸ್ಕೂಲ್ ನಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ಭಾರತ ಸೇವಾದಳ ಯೋಗ ಮತ್ತು ವಿದ್ಯಾರ್ಥಿ ನಾಯಕತ್ವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡುತಿದ್ದರು.

ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಆತ್ರಾಡಿ ಪೃಥ್ವಿರಾಜ್ ಹೆಗ್ಡೆ, ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಮಾತನಾಡಿ ದರು. ಅಧ್ಯಕ್ಷತೆಯನ್ನು ತಾಲೂಕು ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಬಾಸ್ರಿ ಕೆ.ಎಸ್. ವಹಿಸಿದ್ದರು.

ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯ ಮೇಟಿ ಮುದಿಯಪ್ಪ, ಕುತ್ಯಾರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ವೀಣಾ ಚಂದ್ರಶೇಖರ್ ಭಟ್, ಶಂಕರಪುರ ರೋಟರ್ಯಾಕ್ಟ್ ಅಧ್ಯಕ್ಷ ರಾಯನ್ ಫೆರ್ನಾಂಡಿಸ್, ಸೂರ್ಯ ಚೈತನ್ಯ ಸಂಸ್ಥೆಯ ಸಂಸ್ಥಾಪಕ ವಿದ್ವಾನ್ ಶಂಬುದಾಸ್ ಗುರೂಜಿ, ಪ್ರಾಂಶುಪಾಲ ಗುರುದತ್ ಸೋಮಯಾಜಿ, ಸೇವಾದಳದ ಜಿಲ್ಲಾ ಕಾರ್ಯದರ್ಶಿ ಆರೂರು ತಿಮ್ಮಪ್ಪಶೆಟ್ಟಿ, ತಾಲೂಕು ಅಧಿನಾಯಕ ಹೆರಾಲ್ಡ್ ಡಿಸೋಜ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಕುತ್ಯಾರು ಪ್ರಸಾದ್ ಶೆಟ್ಟಿ ಆಗಮಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಮಾರ್ಗದರ್ಶನ ನೀಡಿದರು. ಬಿ.ಪುಂಡಲೀಕ ಮರಾಠೆ ಶಿರ್ವ ಸ್ವಾಗತಿಸಿದರು. ತಾಲೂಕು ಅಧಿನಾಯಕ ಎಸ್.ಎಸ್.ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರಾಜೇಶ್ವರಿ ಮಲ್ಪೆ ಸಹಕರಿಸಿದರು. ಜಿಲ್ಲಾ ಸಂಘಟಕ ಪಕ್ಕೀರಗೌಡ ವಂದಿಸಿದರು.

ಪೂರ್ವಾಹ್ನ ಕುತ್ಯಾರು ಗ್ರಾ,ಪಂ.ಮಾಜಿ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಧ್ವಜಾರೋಹಣ ನೆರವೇರಿಸಿದರು. ಕುತ್ಯಾರು ಅರಮನೆ ಜಿನೇಶ್ ಬ್ಲಾಳ್ ಧ್ವಜಾವರಣ ನೆರವೇರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News