ಉಪಚುನಾವಣೆ ಮೈತ್ರಿ ವಿಚಾರ ವರಿಷ್ಠರಿಗೆ ಬಿಟ್ಟದ್ದು: ಶಾಸಕ ಕೆ.ಸುರೇಶ್‍ಗೌಡ

Update: 2019-08-03 18:29 GMT

ಮಂಡ್ಯ, ಆ.3: ಉಪಚುನಾವಣೆಯಲ್ಲಿ ಮೈತ್ರಿ ಮುಂದುವರೆಯುವುದು, ಬೇಡವೆಂಬುದನ್ನು ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ನಾಗಮಂಗಲ ಶಾಸಕ ಕೆ.ಸುರೇಶ್‍ಗೌಡ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಉಸ್ತುವಾರಿ ಅವರ ಪಕ್ಷದ ವಿಚಾರ. ಆದರೆ, ಮೈತ್ರಿ ಇಲ್ಲವಾದರೆ ಜೆಡಿಎಸ್ 5 ರಿಂದ 6 ಕ್ಷೇತ್ರಗಳನ್ನು ಗೆಲ್ಲುತ್ತದೆ ಎಂದರು.

ಕೆ.ಆರ್.ಪೇಟೆಯಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಲಾಗುವುದು. ನಿಖಿಲ್ ಸ್ಪರ್ಧೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದಿದ್ದರು. ಆದರೆ, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ದ್ವೇಷದ ರಾಜಕಾರಣ ಪ್ರಾರಂಭಿಸಿದ್ದಾರೆ ಎಂದು ಅವರು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News