ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು

Update: 2019-08-04 16:59 GMT

ಮಂಡ್ಯ, ಆ.4: ಕೃಷಿ ಪಂಪ್‍ಸೆಟ್ ಚಾಲನೆ ಮಾಡಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಸ್ಪರ್ಶಗೊಂಡು ರೈತ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಮಂದಗೆರೆ ಗ್ರಾಮದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಗ್ರಾಮದ ಲೇಟ್ ರಂಗಶೆಟ್ಟಿ ಅವರ ಮಗ ಎಂ.ಆರ್.ರವಿ(35) ಮೃತ ರೈತ. ಇವರು ಜಮೀನಿನ ಬಳಿ ಬೆಳೆಗೆ ನೀರು ಬಿಡಲು ಪಂಪ್‍ಸೆಟ್ ಚಾಲನೆ ಮಾಡಲು ಮುಂದಾದಾಗ ಈ ಘಟನೆ ಸಂಭವಿಸಿದೆ. 

ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಗೊತ್ತಿಲ್ಲದೆ ತುಳಿದ ಪರಿಣಾಮ ವಿದ್ಯುತ್ ಸ್ಪರ್ಶಗೊಂಡು ರವಿ ತೀವ್ರ ಅಸ್ವಸ್ಥಗೊಂಡರು. ತಕ್ಷಣ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದರು ಎನ್ನಲಾಗಿದೆ.

ರವಿ ಸಂಬಂಧಿಕರ ಆಕ್ರಂದನ ಮುಗಿಲು ಮಟ್ಟಿತ್ತು. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News