ರಸ್ತೆ ಅಪಘಾತಕ್ಕೆ ಬಿಬಿಎಂಪಿ ನೌಕರ ಬಲಿ

Update: 2019-08-04 17:49 GMT

ಬೆಂಗಳೂರು, ಆ.4: ಬೈಕ್ ಢಿಕ್ಕಿಯಾದ ಪರಿಣಾಮ ಬಿಬಿಎಂಪಿ ನೌಕರ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಆರ್‌ಟಿ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಟಿ ನಗರ ದಿನ್ನೂರಿನ ನಿವಾಸಿ ಗಣೇಶ್ ಕುಮಾರ್ (55) ಮೃತ ನೌಕರ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಬಿಎಂಪಿ ಪಶ್ಚಿಮ ವಿಭಾಗದ ನಿಯಂತ್ರಣಾ ಕೊಠಡಿಯಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ ಕುಮಾರ್ ಅವರು, ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಬರುತ್ತಿದ್ದರು. ಮಾರ್ಗ ಮಧ್ಯೆ ಬಳ್ಳಾರಿ ರಸ್ತೆಯ ಪಶುವೈದ್ಯಕೀಯ ಕಾಲೇಜು ಮುಂಭಾಗ ಎದುರಿನಿಂದ ಬಂದ ಮತ್ತೊಂದು ಬೈಕ್ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಆರ್‌ಟಿ ನಗರ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News