ಜಮ್ಮು-ಕಾಶ್ಮೀರ 370ನೆ ವಿಧಿ ರದ್ದು: ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ..

Update: 2019-08-05 14:33 GMT

ಬೆಂಗಳೂರು, ಆ. 5: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ 370ನೆ ವಿಧಿ ರದ್ಧತಿಯಿಂದ ಮುಂದಿನ ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕರೆ ತುಂಬಾ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸೋಮವಾರ ರಾಮನಗರದ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿನ 370ನೆ ವಿಧಿ ಹಾಗೂ 35ಎ ವಿಧಿ ರದ್ದು ವಿಚಾರವಾಗಿ ಪರ-ವಿರೋಧ ಎರಡು ಇದೆ. ಹೆಚ್ಚಿನ ರೀತಿಯಲ್ಲಿ ಇದು ಆಗಬೇಕೆಂಬ ಭಾವನೆಯನ್ನು ವ್ಯಕ್ತಪಡಿಸಿದ್ದನ್ನು ಗಮನಿಸಿದ್ದೇನೆ. ಇದರಿಂದ ಮುಂದಿನ ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕರೆ ಒಳಿತು ಎಂದು ಹೇಳಿದ್ದಾರೆ.

ಹಾಗೆಯೇ ಜನರು ಸಮಾಜ ಶಾಂತಿಯಿಂದ ಬದುಕಬೇಕು. ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಂಡು ಯಾವುದೇ ಅಶಾಂತಿಗೆ ಅವಕಾಶ ಮಾಡಿಕೊಡದೇ ಉತ್ತಮ ರೀತಿಯಲ್ಲಿ ಹೋಗುವ ಮೂಲಕ ಅಂತಿಮ ಪರಿಹಾರ ದೊರಕಬೇಕು. ಜನರ ಭಾವನೆಗಳಿಗೆ ನಾವು ಒಮ್ಮತದ ಒಪ್ಪಿಗೆ ಕೊಡಬೇಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News