ಯು.ಟಿ.ಖಾದರ್- ರಮೇಶ್‌ ಕುಮಾರ್ ಅಧಿಕಾರಾವಧಿಯಲ್ಲಿ 500 ಕೋಟಿ ರೂ. ಹಗರಣ: ಎಸ್.ಆರ್.ಹಿರೇಮಠ ಆರೋಪ

Update: 2019-08-06 13:06 GMT

ಹುಬ್ಬಳ್ಳಿ, ಆ.6: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿಂದಿನ ಸಚಿವರಾಗಿದ್ದ ಯು.ಟಿ.ಖಾದರ್ ಹಾಗೂ ರಮೇಶ್‌ಕುಮಾರ್ ಅಧಿಕಾರ ಅವಧಿಯಲ್ಲಿ 500ಕೋಟಿ ರೂ. ಹಗರಣವಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ಆರೋಪ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔಷಧ ಹಾಗೂ ತುರ್ತುವಾಹನ ಖರೀದಿಯಲ್ಲಿ ಅವ್ಯವಹಾರ ಮಾಡಲಾಗಿದೆ. ಈ ಹಗರಣದ ಕುರಿತು ಪಾರದರ್ಶಕ ಹಾಗೂ ಸ್ವತಂತ್ರ ಸಂಸ್ಥೆಯಿಂದ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

ಆರ್‌ಟಿಐ ಕಾಯ್ದೆ ರದ್ದು ಪಡಿಸಲು ಕೇಂದ್ರ ಸರಕಾರ ಹುನ್ನಾರ ನಡೆಸುತ್ತಿದ್ದು, ರಾಷ್ಟ್ರಪತಿಗಳು ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಮಧ್ಯ ಪ್ರವೇಶ ಮಾಡಿ ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು. ಈ ವಿಷಯವಾಗಿ ಜನಸಂಗ್ರಾಮ ಪರಿಷತ್‌ನ ವತಿಯಿಂದ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News