370ನೆ ವಿಧಿ ರದ್ದು: ಕೇಂದ್ರದ ನಡೆಗೆ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲ
Update: 2019-08-06 20:19 IST
ಹೊಸದಿಲ್ಲಿ, ಆ.6: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೆ ವಿಧಿಯ ರದ್ದತಿ ವಿಚಾರದಲ್ಲಿ ಕೇಂದ್ರ ಸರಕಾರದ ನಡೆಯನ್ನು ಕಾಂಗ್ರೆಸ್ ನ ಪ್ರಮುಖ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಸಿದ್ದಾರೆ.
“ಜಮ್ಮು ಕಾಶ್ಮೀರ ಮತ್ತು ಲಡಾಖ್ ವಿಷಯದಲ್ಲಿ (ಸರಕಾರದ) ನಡೆಯನ್ನು ನಾನು ಬೆಂಬಲಿಸುತ್ತೇನೆ. ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪಾಲಿಸಿದರೆ ಮತ್ತಷ್ಟು ಉತ್ತಮವಾಗಿರುತ್ತಿತ್ತು. ಇದು ದೇಶದ ಹಿತಾಸಕ್ತಿಯ ದೃಷ್ಟಿಯದ್ದು ಮತ್ತು ನಾನು ಅದನ್ನು ಬೆಂಬಲಿಸುತ್ತೇನೆ” ಎಂದವರು ಹೇಳಿದರು.
I support the move on #JammuAndKashmir & #Ladakh and its full integration into union of India.
— Jyotiraditya M. Scindia (@JM_Scindia) August 6, 2019
Would have been better if constitutional process had been followed. No questions could have been raised then. Nevertheless, this is in our country’s interest and I support this.