ಸಾಲಬಾಧೆ: ಇಬ್ಬರು ರೈತರು ಆತ್ಮಹತ್ಯೆ

Update: 2019-08-06 18:19 GMT

ಮಂಡ್ಯ, ಆ.6: ಸಾಲಬಾಧೆ ತಾಳಲಾರದೆ ಜಿಲ್ಲೆಯಲ್ಲಿ ಮಂಗಳವಾರ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದಲ್ಲಿ ಯೋಗೇಶ್ (45) ಹಾಗು ಮದ್ದೂರು ತಾಲೂಕಿನ ಚಿಕ್ಕದೊಡ್ಡಿ ಗ್ರಾಮದ ಲೋಕೇಶ್(42) ಆತ್ಮಹತ್ಯೆ ಮಾಡಿಕೊಂಡವರು.

2 ಎಕರೆ ಜಮೀನು ಹೊಂದಿದ್ದ ಯೋಗೇಶ್, ಕೃಷಿಗಾಗಿ 6 ಲಕ್ಷ ಸಾಲ ಮಾಡಿದ್ದು, ಸಾಲದ ಒತ್ತಡ ಹೆಚ್ಚಾಗಿದ್ದರಿಂದ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಲೋಕೇಶ್ ಕೂಡ ಎರಡು ಎಕರೆ ಜಮೀನು ಹೊಂದಿದ್ದು, ಕೃಷಿಗಾಗಿ 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಾಧ್ಯವಾಗದೇ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮವಾಗಿ ಕೆ.ಆರ್.ಪೇಟೆ ಗ್ರಾಮಾಂತರ ಹಾಗೂ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News