ಬ್ರಹ್ಮಾವರ: ಮನೆಗೆ ನುಗ್ಗಿ ನಗ ನಗದು ಕಳವು
Update: 2019-08-07 17:10 GMT
ಬ್ರಹ್ಮಾವರ, ಆ.7: ಹಾಲಾಡಿ ಮುದೂರಿನ ನಟರಾಜ್ ಹಂಜಾರ್ ಎಂಬವರ ಹೆಗ್ಗುಂಜೆ ಎಂಬಲ್ಲಿರುವ ಬಾಡಿಗೆ ಮನೆಗೆ ಆ.3ರಿಂದ ಆ.6ರ ಮಧ್ಯಾವಧಿಯಲ್ಲಿ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ನಟರಾಜ್ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಬೆಂಗಳೂರಿಗೆ ಹೋಗಿದ್ದು, ಈ ವೇಳೆ ಮನೆಯ ಎದುರಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕಾಪಾಟಿನಲ್ಲಿದ್ದ ಚಿನ್ನದ ಬ್ರೆಸ್ಲೆಟ್, ರೋಪ್ ಚೈನ್, 5 ಚಿನ್ನದ ಉಂಗುರ, ಚಿನ್ನದ ಸರ ಹಾಗೂ 6ಲಕ್ಷ ರೂ. ನಗದು ಕಳವು ಮಾಡಿರುವುದಾಗಿ ದೂರ ಲಾಗಿದೆ.
ಇವುಗಳ ಒಟ್ಟು ಮೌಲ್ಯ 7.20ಲಕ್ಷ ರೂ. ಎಂದು ಅಂದಾಜಿಸ ಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.