ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿಕೆ

Update: 2019-08-08 04:57 GMT

ಬೆಳ್ತಂಗಡಿ, ಆ.8: ಬೆಳ್ತಂಗಡಿ ತಾಲೂಕಿನ ಬಹುತೇಕ ಪ್ರದೇಶಗಳಲ್ಲಿ ಗುರುವಾರವೂ ಭಾರೀ ಮಳೆ ಮುಂದುವರಿದಿದೆ.

ಚಾರ್ಮಾಡಿ ಘಾಟಿ ಪ್ರದೇಶವೂ ಸೇರಿದಂತೆ ಪಶ್ಚಿಮಘಟ್ಟಕ್ಕೆ ತಾಗಿಕೊಂಡಿರುವ ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ಬಹುತೇಕ ನದಿಗಳು ಹಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಸಾರಲಾಗಿದೆ. ಪೇಟೆಗಳಲ್ಲಿ ಜನಸಂಚಾರ ವಿರಳವಾಗಿದೆ.

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿಷೇಧ ಮುಂದುವರಿದಿದ್ದು, ಜನರು ಪರದಾಡುವಂತಾಗಿ.ೆ ಚಿಕ್ಕಮಗಳೂರು ಕಡೆಗೆ ತೆರಳಬೇಕಾಗಿರುವ ಘನ ವಾಹನಗಳು ಘಾಟಿಯ ಕೆಳಗೆ ಸಾಲುಗಟ್ಟಿ ನಿಂತಿವೆ. ಈ ನಡುವೆ ಭೂಕುಸಿತದಿಂದ ರಸ್ತೆಯಲ್ಲಿ ರಾಶಿ ಬಿದ್ದಿರುವ ಕಲ್ಲುಮಣ್ಣು, ಉರುಳಿಬಿದ್ದಿರುವ ಬೃಹತ್ ಮರಗಳನ್ನು ತೆರವುಗೊಳಿಸಿ ಘಾಟಿ ರಸ್ತೆಯ ದುರಸ್ತಿ ಕಾರ್ಯ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News