ಶ್ರೀನಗರದ ಏರ್‌ಪೋರ್ಟ್‌ನಲ್ಲಿ ಗುಲಾಂ ನಬಿ ಆಝಾದ್‌ಗೆ ತಡೆ

Update: 2019-08-08 08:10 GMT

ಹೊಸದಿಲ್ಲಿ, ಆ.8: ಕಣಿವೆ ರಾಜ್ಯಕ್ಕೆ ಪ್ರಯಾಣ ಬೆಳಸಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕನಾಗಿರುವ ಗುಲಾಂ ನಬಿ ಆಝಾದ್‌ರನ್ನು ಶ್ರೀನಗರದ ವಿಮಾನ ನಿಲ್ದಾಣದಲ್ಲಿ ತಡೆ ಹಿಡಿಯಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ನ್ನು ಕೇಂದ್ರ ಸರಕಾರ ಹಿಂದಕ್ಕೆ ಪಡೆದ ಬಳಿಕ ಮೊದಲ ಬಾರಿ ತನ್ನ ತವರು ರಾಜ್ಯಕ್ಕೆ ಆಝಾದ್ ಭೇಟಿ ನೀಡಲು ಬಂದಿದ್ದರು. ಆಝಾದ್‌ಗೆ ಜಮ್ಮು ಹಾಗೂ ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ಗುಲಾಂ ಅಹ್ಮದ್ ಮೀರ್ ಸಾಥ್ ನೀಡಿದ್ದಾರೆ.

 ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಗೆ ಭೇಟಿ ನೀಡಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರಸ್ತೆ ಬದಿಯಲ್ಲಿ ತಿಂಡಿ ತಿನ್ನುತ್ತಾ ಸ್ಥಳೀಯರೊಂದಿಗೆ ಸಂಭಾಷಣೆ ನಡೆಸುತ್ತಿರುವ ಚಿತ್ರ ಹಾಗೂ ವಿಡಿಯೋದ ಕುರಿತು ಪ್ರತಿಕ್ರಿಯಿಸಿದ ಆಝಾದ್,‘‘ನೀವು ಹಣ ನೀಡಿ ಯಾರನ್ನಾದರೂ ತಮ್ಮೊಂದಿಗೆ ಕರೆದೊಯ್ಯಲು ಸಾಧ್ಯವೇ? ಎಂದು ಪ್ರಶ್ನಿಸಿದ್ದರು. ಆಝಾದ್ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಕ್ಷಮೆಕೋರುವಂತೆ ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News