ಪ್ರವಾಹ: ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ತಿಂಗಳ ವೇತನ- ಸಂಸದ ಡಿ.ಕೆ.ಸುರೇಶ್

Update: 2019-08-08 15:10 GMT

ಬೆಂಗಳೂರು, ಆ.8: ಉತ್ತರ ಕರ್ನಾಟಕ ಭಾಗದ ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿದ್ದಾರೆ.

ಭಾರಿ ಮಳೆ ಹಾಗೂ ನೆರೆ ಹಾವಳಿಯು ಉತ್ತರ ಕರ್ನಾಟಕ ಭಾಗದ ಜನರ ದಿನ ನಿತ್ಯದ ಜೀವನಕ್ಕೆ ಧಕ್ಕೆ ತಂದಿದೆ. ಸರಕಾರದ ಆಡಳಿತ ಯಂತ್ರ, ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು, ಪದಾಧಿಕಾರಿಗಳು ಸಂತ್ರಸ್ತರ ನೆರವಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದ್ದಾರೆ.

ಅಲ್ಲದೆ, ಬೆಂಗಳೂರು ಮೂಲದ ಕಾರ್ಪೊರೇಟ್ ಕಂಪೆನಿಗಳು, ಸ್ವಯಂ ಸೇವಾ ಸಂಸ್ಥೆಗಳು, ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಬೇಕು. ತುರ್ತು ಸ್ಪಂದನೆಯಾಗಿ ಈ ಸಹಾಯವಾಣಿ ಸಂಖ್ಯೆ 080-1070, 080-22340676, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ನಿಯಂತ್ರಣ ಕೊಠಡಿ 080-25573333ಗೆ ಸಂಪರ್ಕಿಸುವಂತೆ ಸುರೇಶ್ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News