ಮೈಸೂರು: ಭಾರೀ ಮಳೆಗೆ ಗೋಡೆ ಕುಸಿದು ಓರ್ವ ಮೃತ್ಯು
Update: 2019-08-09 10:02 GMT
ಮೈಸೂರು: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ಮನೆಯ ಗೋಡೆ ಕುಸಿದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಭೀಮಯ್ಯ ಅವರ ಪುತ್ರ ಗಣಪತಿ (35) ಎಂದು ಗುರುತಿಸಲಾಗಿದೆ.
ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಮನೆಯ ಗೋಡೆ ಗುರುವಾರ ತಡ ರಾತ್ರಿ 12 ಗಂಟೆಗೆ ಕುಸಿದು ಬಿದ್ದಿದ್ದು, ಇದರಿಂದ ಗಣಪತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಶಾಸಕ ಎಸ್.ಎ.ರಾಮದಾಸ್ ಘಟನೆ ನಡೆದ ವೀರನಹೊಸಹಳ್ಳಿಗೆ ಭೇಟಿ ನೀಡಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಮತ್ತೊಂದೆಡೆ ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತಿದ್ದು, ನದಿಯಂಚಿನಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗುತ್ತಿದೆ.