ಮೈಸೂರು ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಆ.10 ರಂದು ರಜೆ

Update: 2019-08-09 15:33 GMT

ಮೈಸೂರು,ಆ.9: ಜಿಲ್ಲೆಯಲ್ಲಿ ನಿಂರತರ ಸುರಿಯುತ್ತಿರು ಮಳೆಯಿಂದ ಜನಜೀವನಕ್ಕೆ ಅಡ್ಡಿಯಾಗಿದ್ದು, ಆ.10 ರಂದು ಎಲ್ಲಾ ಶಾಲೆ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ರಜೆ ಘೋಷಿಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕಬಿನಿ, ಹಾರಂಗಿ, ಲಕ್ಷ್ಮಣ ತೀರ್ಥ ನದಿಗಳು ತುಂಬಿದ್ದು, ಪ್ರವಾಹ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.

ಇನ್ನು, ನಂಜನಗೂಡು, ಎಚ್.ಡಿ.ಕೋಟೆ, ಹುಣಸೂರು ತಾಲೂಕಿನ ಹಲವು ಕಡೆಗಳಲ್ಲಿ ಪ್ರವಾಹ ಹೆಚ್ಚಿದ್ದು, ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಮುಂದೆ ಆಗಬಹುದಾದ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ರಜೆಯನ್ನು ನೀಡಿದ್ದಾರೆ.

ಹಲವು ಕಡೆಗಳಲ್ಲಿ ಪ್ರವಾಹದ ಭೀತಿ ಹೆಚ್ಚಿದ್ದು, ಇನ್ನೂ ಮೂರು ದಿನ ಇದೇ ರೀತಿಯ ಮಳೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News