ಕೆಎಂಸಿ ನರ್ಸಿಂಗ್ ವಿಭಾಗಕ್ಕೆ ಎನ್‌ಎಬಿಎಚ್ ಶ್ರೇಷ್ಠತಾ ಪ್ರಮಾಣಪತ್ರ

Update: 2019-08-09 16:31 GMT

ಮಣಿಪಾಲ, ಆ.9: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಶುಶ್ರೂಷಾ (ನರ್ಸಿಂಗ್) ವಿಭಾಗಕ್ಕೆ ಶ್ರೇಷ್ಠತಾ (ಎಕ್ಸಲೆನ್ಸ್) ಪ್ರಮಾಣಪತ್ರ, ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕದಾರರ ಮಾನ್ಯತೆ ಪಡೆದ ಸಂಘ (ಎನ್‌ಎ ಬಿಎಚ್), ಭಾರತೀಯ ಗುಣಮಟ್ಟದ ಮಂಡಳಿ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ)ಯಿಂದ ಇಂದಿನಿಂದ ಜಾರಿಗೆ ಬಂದಿದೆ.

ಈ ಸಂಬಂಧ ಮಣಿಪಾಲ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ಹಾಗೂ ಕುಲಪತಿ ಡಾ. ಎಚ್.ವಿನೋದ್ ಭಟ್ ಅವರು ಕೆಎಂಸಿ ಆಸ್ಪತ್ರೆಯ ಶುಷ್ರೂಷಾ ಅಧೀಕ್ಷಕರಾದ ಡೀನಾ ಪ್ರಭಾವತಿಗೆ ಇಂದು ಪ್ರವಾಣ ಪತ್ರವನ್ನು ಹಸ್ತಾಂತರಿಸಿದರು.

ಮಾಹೆ ಮಣಿಪಾಲದ ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಕುಲಸಚಿವ ಡಾ.ನಾರಾಯಣ ಸಭಾಹಿತ, ಕೆಎಂಸಿ ಕಾಲೇಜಿನ ಡೀನ್ ಡಾ. ಶರತ್ ಕೆ. ರಾವ್, ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ.ಮುತ್ತಣ್ಣ, ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ ಶೆಟ್ಟಿ ಹಾಗೂ ಡಾ.ಪದ್ಮರಾಜ ಹೆಗ್ಡೆ ಉಪಸ್ಥಿತರಿದ್ದರು.

ರೋಗಿಗಳ ಆರೈಕೆ, ರೋಗಿಗಳ ಶಿಕ್ಷಣ ಮತ್ತು ಜಾಗೃತಿ, ಶುಶ್ರೂಷಾ ಸಂಪನ್ಮೂಲ ನಿರ್ವಹಣೆ, ಶುಶ್ರೂಷೆಯ ಗುಣಮಟ್ಟ, ಸಂವಹನ, ಮಾರ್ಗ ದರ್ಶನ ಮತ್ತು ಸೋಂಕು ನಿಯಂತ್ರಣ ಕ್ರಮಗಳಂತ ಶುಶ್ರೂಷಾ ಆರೈಕಾ ವಿಭಾಗದ ಎಲ್ಲಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು ಕಾಯ್ದು ಕೊಳ್ಳುವ ಸೌಲಭ್ಯಗಳಿಗೆ ಈ ಪ್ರಮಾಣೀಕರಣ ಪತ್ರವನ್ನು ನೀಡಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News