ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ
Update: 2019-08-09 16:41 GMT
ಮಂಗಳೂರು, ಆ.9: ಜಮ್ಮು ಕಾಶ್ಮೀರದಲ್ಲಾದ ಬೆಳವಣಿಗೆ ಹಾಗೂ ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ತಪಾಸಣೆ ನಡೆಸಲಾಯಿತು.
ಬಾಂಬ್ ಪತ್ತೆದಳ, ಶ್ವಾನದಳ, ರೈಲ್ವೆ ಸುರಕ್ಷತಾ ಪಡೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಪಾರ್ಕಿಂಗ್ ಪ್ರದೇಶ, ಪಾರ್ಸೆಲ್, ಪ್ರಯಾಣಿಕರ ಲಗೇಜು ಹಾಗೂ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿದರು. ರೈಲ್ವೆ ಸುರಕ್ಷತಾ ಪಡೆಯ ಇನ್ಸ್ಪೆಕ್ಟರ್ ಅಜಯ ಕುಮಾರ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು.
ಈ ಸಂದರ್ಭ ರೈಲ್ವೆ ಪ್ರಯಾಣಿಕರೊಂದಿಗೆ ಸಂವಾದ ನಡೆಸಲಾಯಿತು. ದುಷ್ಕರ್ಮಿಗಳ ಬಗ್ಗೆ ಯಾವುದಾದರು ಮಾಹಿತಿ ಲಭಿಸಿದರೆ ತಕ್ಷಣವೇ ನೀಡುವಂತೆ ಹಾಗೂ ಅವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು. ರೈಲುಗಳಲ್ಲೂ ತಪಾಸಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.