ಪಣಂಬೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2019-08-09 18:31 GMT

ಮಂಗಳೂರು, ಆ. 9: ಕೊಲೆಯತ್ನ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸುವಲ್ಲಿ ಶುಕ್ರವಾರ ಯಶಸ್ವಿಯಾಗಿದ್ದಾರೆ.

ಕಸಬಾ ಬೆಂಗ್ರೆ ನಿವಾಸಿ ಸರ್ಫರಾಝ್ (21) ಬಂಧಿತ ಆರೋಪಿ.

ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ನಡೆದ ಕೊಲೆಯತ್ನ ಪ್ರಕರಣದ ಪ್ರಮಖ ಆರೋಪಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್ ಹಾಗೂ ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ್‌ಗೌಡ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಠಾಣಾ ಇನ್‌ಸ್ಪೆಕ್ಟರ್ ಅಝಮತ್ ಅಲಿ, ಪಿಎಸ್ಸೈ ಎಂ.ಎನ್.ಉಮೇಶ್ ಕುಮಾರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News