ಕೆಎಸ್ಸಾರ್ಟಿಸಿ ಬಸ್ ಉರುಳಿ ಹಲವರಿಗೆ ಗಾಯ

Update: 2019-08-09 19:09 GMT

ಬೆಂಗಳೂರು, ಆ.9:ವೇಗವಾಗಿ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೆಟ್ರೊ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ 8 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೈಸೂರು ರಸ್ತೆಯ ಜ್ಞಾನಭಾರತಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಯಕ್ಕಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಿಂದ ಕೊಳ್ಳೆಗಾಲಕ್ಕೆ ಬೆಳಗ್ಗೆ 8:30ರ ವೇಳೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಜ್ಞಾನಭಾರತಿಯ ಬಸ್ ನಿಲ್ದಾಣದ ಬಳಿ ಬಲಭಾಗದಿಂದ ಖಾಸಗಿ ಬಸ್ ವೇಗವಾಗಿ ಹೋಗುತ್ತಿದ್ದಾಗ ಎಡಗಡೆ ಹೋಗಲು ಹೋಗಿ ರಸ್ತೆ ವಿಭಜಕ ಹಾಗೂ ಮೆಟ್ರೊ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಉರುಳಿ ಬಿದ್ದಿದೆ ಎನ್ನಲಾಗಿದೆ.

ಘಟನೆಯಲ್ಲಿ ಚಾಲಕ-ನಿರ್ವಾಹಕರಿಗೂ ಗಾಯಗಳಾಗಿದ್ದು, ಬಸ್‌ನಲ್ಲಿ 12 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News