ಮಂಗಳೂರಿನಲ್ಲಿ ಹುಸಿಬಾಂಬ್ ಕರೆ

Update: 2019-08-10 17:00 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಆ.10: ನಗರದ ಫಳ್ನೀರ್ ಸಮೀಪದ ರಸ್ತೆ ಬದಿಯಲ್ಲಿ ಶನಿವಾರ ಬೆಳಗ್ಗೆ ಕಂಡು ಬಂದ ಪ್ಲಾಸ್ಟಿಕ್ ಲಕೋಟೆಯನ್ನು ‘ಬಾಂಬ್’ ಎಂಬುದಾಗಿ ತಪ್ಪಾಗಿ ಭಾವಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದಾಗ ಹುಸಿ ಬಾಂಬ್ ಕರೆ ಎನ್ನುವುದು ಬೆಳಕಿಗೆ ಬಂದಿದೆ.

ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದಾಗ ಅದರಲ್ಲಿದ್ದುದು ಕೇವಲ ಕಸ-ಕಡ್ಡಿ ಮಾತ್ರ. ಇದನ್ನು ನಾಯಿಗಳು ಎಳೆದು ಹಾಕಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಜತೆಗೆ, ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಡಾ.ಕನ್ಹಯ್ಯ ಕುಮಾರ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಬಗ್ಗೆ ಕೆಲ ಸಂಘಟನೆಗಳಿಂದ ವಿರೋಧವೂ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದರು. ಈ ಮಧ್ಯೆ, ‘ಫಳ್ನೀರ್‌ನಲ್ಲಿ ಬಾಂಬ್ ಇದೆ’ ಎಂಬ ಕರೆ ಬಂದಾಗ ಸಹಜವಾಗಿ ಆತಂಕ ಹುಟ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News