ಜಮ್ಮು-ಕಾಶ್ಮೀರದಲ್ಲಿ ರಿಲಯನ್ಸ್‌ನಿಂದ ಭಾರೀ ಹೂಡಿಕೆಗೆ ಚಿಂತನೆ

Update: 2019-08-12 13:11 GMT

 ಮುಂಬೈ, ಆ.11: ಹೊಸ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಹಾಗೂ ಕಾಶ್ಮೀರ, ಲಡಾಖ್‌ನಲ್ಲಿ ರಿಲಯನ್ಸ್ ಸಮೂಹ ಭಾರೀ ಹೂಡಿಕೆ ಮಾಡಲು ಚಿಂತಿಸಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಇಂದು ಹೇಳಿದ್ದಾರೆ.

"ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ನಾವು ಹೂಡಿಕೆ ಮಾಡುತ್ತೇವೆ. ಯೋಜನೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಘೋಷಣೆ ಮಾಡುತ್ತೇವೆ. ಆ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆ ರಚಿಸುತ್ತೇವೆ. ಕಾಶ್ಮೀರ ಜನರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಲವಾರು ಪ್ರಕಟಣೆಗಳನ್ನು ನೀವು ಮುಂಬರುವ ತಿಂಗಳುಗಳಲ್ಲಿ ನಿರೀಕ್ಷಿಸಬಹುದು'' ಎಂದು ಅಂಬಾನಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News