ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ಯಡಿಯೂರಪ್ಪ
Update: 2019-08-13 06:05 GMT
ಶಿವಮೊಗ್ಗ, ಆ.13: ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸದ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರವಾಹ ಪೀಡಿತ ತೀರ್ಥಹಳ್ಳಿ ತಾಲೂಕು ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಂಗಳವಾರ ಬೆಳಗ್ಗೆ ಭೇಟಿದ ಅವರು ಅವಲೋಕನ ನಡೆಸಿದರು.
ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ರೈತರ ರಾಜ್ಯ ಸರಕಾರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.