ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಕೊಡದಿದ್ದರೆ ಸರಕಾರ ಉರುಳಿಸುತ್ತೇನೆ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

Update: 2019-08-13 08:44 GMT

ಬೆಳಗಾವಿ, ಆ.13: ಭಾರೀ ಪ್ರವಾಹದಲ್ಲಿ ಸಿಲುಕಿ ಮನೆ ಕಳೆದುಕೊಂಡಿರುವವರಿಗೆ ಹೊಸ ಮನೆ ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದು. ಪ್ರವಾಹಪೀಡಿತ ಜನರಿಗೆ ಮನೆ ಕಟ್ಟಿಸಿಕೊಡದಿದ್ದರೆ ಈ ಸರಕಾರವನ್ನೇ ಉರುಳಿಸುತ್ತೇನೆ ಎಂದು ಅರಭಾವಿ ಶಾಸಕ, ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಅವರು ಯಡಿಯೂರಪ್ಪ ಸರಕಾರದ ವಿರುದ್ಧ ಗುಡುಗಿದ್ದಾರೆ.

ಸೋಮವಾರ ಘಟಪ್ರಭಾ ನದಿ ದಂಡೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸರಕಾರಕ್ಕೆ ಈ ಎಚ್ಚರಿಕೆ ನೀಡಿದ್ದಾರೆ.

ಬಾಲಚಂದ್ರ ಅವರ ಹೇಳಿಕೆ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News