ಯಡಿಯೂರಪ್ಪ ಸಿಎಂ ಆದರೆ ಅತಿವೃಷ್ಟಿಯಾಗುತ್ತೆ, ಬರಗಾಲ ಹೋಗುತ್ತೆ ಎಂಬ ಮಾತಿದೆ ಎಂದ ಬಿಎಸ್ ವೈ!

Update: 2019-08-13 13:34 GMT

ಶಿವಮೊಗ್ಗ, ಆ.13: “ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಅತಿವೃಷ್ಟಿಯಾಗುತ್ತೆ, ಬರಗಾಲ ಹೋಗುತ್ತೆ ಎಂಬ ಮಾತು ಎಲ್ಲರ ಬಾಯಲ್ಲೂ ಇದೆ. ಅದೇ ರೀತಿಯಲ್ಲಿ ರಾಜ್ಯದ ಎಲ್ಲ ಜಲಾಶಯಗಳು ತುಂಬಿ ತುಳುಕುತ್ತಿವೆ. ಕೆರೆಕಟ್ಟೆಗಳು ಭರ್ತಿಯಾಗಿವೆ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಶಿಕಾರಿಪುರದ ಅಂಜನಾಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಈ ಮಾತುಗಳನ್ನು ಹೇಳಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಜೋರಾಗಿ ಕೂಗಿ, ಚಪ್ಪಾಳೆ ತಟ್ಟಿದ್ದು ಕಂಡುಬಂತು.

ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ತೀರಪ್ರದೇಶ, ಮಲೆನಾಡು ಹಾಗೂ ಮಧ್ಯಕರ್ನಾಟಕ ಸೇರಿದಂತೆ 16 ಜಿಲ್ಲೆಗಳಲ್ಲಿ ಸಂಭವಿಸಿದ ಜಲಪ್ರಳಯದಲ್ಲಿ ಇಲ್ಲಿಯವರೆಗೂ 48 ಮಂದಿ ಸಾವನ್ನಪ್ಪಿ, 4 ಲಕ್ಷಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News