ಮುಖ್ಯಮಂತ್ರಿ ಪರಿಹಾರ ನಿಧಿಗೆ 2.69 ಕೋಟಿ ರೂ.ನೆರವು

Update: 2019-08-13 16:43 GMT

ಬೆಂಗಳೂರು, ಆ. 13: ಮುಖ್ಯಮಂತ್ರಿ ಪರಿಹಾರ ನಿಧಿಗೆ ಪ್ರಕೃತಿ ವಿಕೋಪದ ಸಂತ್ರಸ್ತರ ನೆರವಿಗಾಗಿ ಆ.9ರಿಂದ ಈವರೆಗೆ 2.69 ಕೋಟಿ ರೂ.ಗಳಿಗೂ ಅಧಿಕ ಮೊತ್ತದ (2,69,59,825) ದೇಣಿಗೆ ಸಂಗ್ರಹವಾಗಿದೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯಲ್ಲಿ 101.7ಕೋಟಿ ರೂ. ಲಭ್ಯವಿದೆ. ಇಂದು 28 ಡಿ.ಡಿ.ಗಳ ಮೂಲಕ 1.83 ಕೋಟಿ ರೂ.ಸೇರಿ 2.50 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಹಣ ಸಂಗ್ರಹವಾಗಿದೆ ಎಂದು ತಿಳಿಸಲಾಗಿದೆ.

ಪ್ರವಾಹ ಪೀಡಿತರಿಗೆ ನೆರವಾಗಲು ಬಯಸುವವರು ಮುಖ್ಯಮಂತ್ರಿ ಪರಿಹಾರ ನಿಧಿಯ ಖಾತೆಗೆ ನೇರವಾಗಿ ಆನ್‌ಲೈನ್ ಮೂಲಕ ವರ್ಗಾಯಿಸಬಹುದು ಅಥವಾ ಚೆಕ್ ಅಥವಾ ಡಿ.ಡಿ. ಮೂಲಕ ನೆರವು ನೀಡಬಹುದು ಎಂದು ಸಿಎಂ ಕಚೇರಿ ಕೋರಿದೆ.

ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆ, ಎಸ್‌ಬಿಐ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ), ವಿಧಾನಸೌಧ ಶಾಖೆ, ಖಾತೆ ಸಂಖ್ಯೆ-3788 7098 605, ಐಎಫ್‌ಎಸ್‌ಸಿ ಕೋಡ್- ಎಸ್‌ಬಿಐಎನ್0040277, ಎಂಐಸಿಆರ್ ಸಂಖ್ಯೆ-5600 02419ಕ್ಕೆ ನೆರವು ನೀಡಿ ಎಂದು ಮನವಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News