ಮುಖ್ಯಮಂತ್ರಿ ಸೂಚನೆಯಂತೆ ಶಿಕ್ಷಕರ ವರ್ಗಾವಣೆಗೆ ತಡೆ: ಜಗದೀಶ್

Update: 2019-08-13 17:12 GMT

ಬೆಂಗಳೂರು, ಆ.8: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ತಾತ್ಕಾಲಿಕವಾಗಿ ವರ್ಗಾವಣೆ ತಡೆಹಿಡಿಯಲಾಗಿದೆಯಷ್ಟೆ. ಆದರೆ, ವರ್ಗಾವಣೆ ಪ್ರಕ್ರಿಯೆ ಯಾವ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ವೇಳಾಪಟ್ಟಿಯಂತೆ ಮಂಗಳವಾರ ಪ್ರಾಥಮಿಕ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಬೇಕಿತ್ತು. ಕೆಲವು ವಿಷಯಗಳಲ್ಲಿ ಮುಖ್ಯಮಂತ್ರಿ ಮಾಹಿತಿ ಕೇಳಿದ್ದಾರೆ. ಅದಕ್ಕಾಗಿ ಕೌನ್ಸೆಲಿಂಗ್ ಅನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದಿದ್ದಾರೆ.

ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಯಲಿದ್ದು, ಕೆಲವು ಕಾನೂನು ತೊಡಕುಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಸೂಚನೆಯನ್ನು ಆಧರಿಸಿ ಕೌನ್ಸೆಲಿಂಗ್ ದಿನಾಂಕ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News