ಕೇಳಿದಷ್ಟು ಹಣ ನೀಡಲು ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ : ಸಿಎಂ ಯಡಿಯೂರಪ್ಪ
Update: 2019-08-14 08:22 GMT
ಶಿವಮೊಗ್ಗ, ಆ. 14: ‘ಬೆಳೆಹಾನಿಯ ಅಂದಾಜು ಸಿದ್ಧಪಡಿಸಲು ಅವಸರ ಬೇಡ. ಕೇಳಿದಷ್ಟು ಹಣ ನೀಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ. 8 ರಿಂದ 10 ದಿನಗಳು ಸಮಯ ತೆಗೆದುಕೊಂಡು ನಿಖರ ವರದಿ ನೀಡಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಮಂಗಳವಾರ ಸಂಜೆ ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ನೆರೆ ಪರಿಸ್ಥಿತಿ ಕುರಿತು ಅಧಿಕಾರಿಗಳ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.
ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವ ವನ್ಯಜೀವಿ ವಿಭಾಗದ ಡಿಎಫ್ಒ ಅವರನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ‘ಹೊಂದಿಕೊಂಡು ಹೋಗಿ ಇಲ್ಲವೇ ರಾಯಚೂರು, ಕಲಬುರ್ಗಿಗೆ ಹೋಗಲು ಸಿದ್ಧರಾಗಿ’ ಎಂದು ಎಚ್ಚರಿಸಿದರು.