ಪ್ರಾಕೃತಿಕ ವಿಕೋಪ: ಡಿಸಿಸಿಯಿಂದ ಅಧ್ಯಯನ ಸಮಿತಿ ರಚನೆ
Update: 2019-08-14 10:19 GMT
ಮಂಗಳೂರು, ಆ.14: ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೊಳಗಾಗಿರುವ ದ.ಕ.ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.
ಸಮಿತಿಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ವಸಂತ ಬಂಗೇರ, ಮೊದಿನ್ ಬಾವ, ಶಕುಂತಲಾ ಶೆಟ್ಟಿ, ಜೆ.ಆರ್ ಲೋಬೋ ಹಾಗೂ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರಿದ್ದಾರೆ.
ಈ ತಂಡವು ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಕೆಪಿಸಿಸಿಗೆ ಒಂದು ವಾರದೊಳಗೆ ವರದಿ ನೀಡಲಿದೆ. ನಿಯೋಗವು ಭೇಟಿ ನೀಡುವ ಸಂದರ್ಭ ಆಯಾ ಪ್ರದೇಶ ಕಾರ್ಯಕರ್ತರು ಮಾಹಿತಿ ನೀಡಿ ಸಹಕರಿಸಲು ಡಿಸಿಸಿ ಅಧ್ಯಕ್ಷರು ಮನವಿ ಮಾಡಿದ್ದಾರೆ ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.