ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2019-08-14 16:34 GMT

ಬೆಂಗಳೂರು, ಆ.14: ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಾಗರಭಾವಿ ರಿಂಗ್ ರಸ್ತೆಯ ಸುವರ್ಣ ಲೇಔಟ್ ಜಂಕ್ಷನ್‌ನಲ್ಲಿ ನಡೆದಿದೆ.

ಶ್ರೀನಗರದ ದಿವಾಕರ್(27) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.

ಮಂಡ್ಯದ ವಾಟೆಜಗನಹಳ್ಳಿ ಮೂಲದ ದಿವಾಕರ್, ಬೆಂಗಳೂರು ಸಿಟಿ ಇನ್ಸಿಟಿಟ್ಯೂಟ್‌ನಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರು. ಚಿಕ್ಕಬಿದರಕಲ್ಲುವಿನ ಅಕ್ಕನ ಮನೆಗೆ ಮಂಗಳವಾರ ದಿವಾಕರ್ ಬೈಕ್‌ನಲ್ಲಿ ನಾಗರಭಾವಿ ರಿಂಗ್ ರಸ್ತೆಯ ಸುವರ್ಣ ಲೇಔಟ್ ಜಂಕ್ಷನ್‌ನಿಂದ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಬ್ಯಾಟರಾಯನಪುರ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News