ಕಾಂಗ್ರೆಸ್ ಮುಖಂಡ ನೇಣು ಬಿಗಿದು ಆತ್ಮಹತ್ಯೆ

Update: 2019-08-14 16:41 GMT

ಬೆಂಗಳೂರು, ಆ.14: ಕಾಂಗ್ರೆಸ್ ಮುಖಂಡರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಇಲ್ಲಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೀರಣ್ಣ ಗೌಡ(50) ಮೃತ ಕಾಂಗ್ರೆಸ್ ಮುಖಂಡರು ಎಂದು ತಿಳಿದುಬಂದಿದೆ.

ಮಂಗಳವಾರ ರಾತ್ರಿ 8ರ ವೇಳೆ ಪತ್ನಿ ಹೊರ ಹೋಗಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಸರುಘಟ್ಟ ಮೂಲದ ವೀರಣ್ಣ ಗೌಡ ಅವರು ಯಲಹಂಕ ಉಪನಗರದಲ್ಲಿ ಹಲವು ವರ್ಷಗಳಿಂದ ಕಾಂಗ್ರೆಸ್ ಮುಖಂಡರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಕೂಡ ನಡೆಸುತ್ತಿದ್ದರು ಎನ್ನಲಾಗಿದೆ.

ಅವರಿಗೆ ಇಬ್ಬರು ಮಕ್ಕಳಿದ್ದು, ಬೇರೆ ಕಡೆ ವಾಸಿಸುತ್ತಿದ್ದರು. ಪತ್ನಿಯೊಂದಿಗೆ ನೆಲೆಸಿದ್ದ ಅವರು ಕೆಲ ದಿನಗಳಿಂದ ಹೊಟ್ಟೆ ನೋವು ಇನ್ನಿತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅದರಿಂದ ಬೇಸತ್ತು ಮದ್ಯಪಾನ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News