ನೆರೆ ಪರಿಹಾರ: 1 ತಿಂಗಳ ವೇತನ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ

Update: 2019-08-14 17:01 GMT

ಬೆಂಗಳೂರು, ಆ.14: ಹಲವು ಕಡೆ ಮಳೆ, ಪ್ರವಾಹ ಹಿನ್ನಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಒಂದು ತಿಂಗಳ ವೇತನವನ್ನು ರಾಜ್ಯದ ನೆರೆ ಪರಿಹಾರ ನಿಧಿಗೆ ನೀಡಿದ್ದಾರೆ.

ಸಂತ್ರಸ್ತರ ನೆರವಿಗಾಗಿ ಜನ-ಸಾಮಾನ್ಯರು, ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ಧಾವಿಸಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಹ, ವೈಯಕ್ತಿಕವಾಗಿ ಒಂದು ತಿಂಗಳ ವೇತನ ನೀಡಿದ್ದಾರೆ. ಈ ಸಂಬಂಧ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಅವರನ್ನು ಭೇಟಿ ಮಾಡಿ, ಪರಿಹಾರ ಪತ್ರ ಹಾಗೂ ಚೆಕ್ ಅನ್ನು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News