ತೋಡಿನ ನೀರಿಗೆ ಬಿದ್ದು ಮೃತ್ಯು
Update: 2019-08-15 15:48 GMT
ಕಾರ್ಕಳ, ಆ.15: ವಿಪರೀತ ಮಳೆಯಿಂದ ಕಾಲು ಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಆ.14ರಂದು ಸಂಜೆ ವೇಳೆ ಕಾಂತಾವರ ಗ್ರಾಮದ ಬೇಲಾಡಿ ಮಂಚದ ಬೈಲು ಎಂಬಲ್ಲಿ ನಡೆದಿದೆ.
ಮೃತರನ್ನು ಮಂಚದಬೈಲು ನಿವಾಸಿ ನೀಲಯ್ಯ(65) ಎಂದು ಗುರು ತಿಸಲಾಗಿದೆ.
ಇವರು ಸಂಜೆ ಬೆಳುವಾಯಿ ಪೇಟೆಗೆ ಹೋಗಿ ವಾಪಾಸು ಮನೆಗೆ ಬರುತ್ತಿದ್ದಾಗ ಮನೆ ಸಮೀಪದ ಕಾಲು ಸಂಕವನ್ನು ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ನಿರೀನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.