ಜಿಂಕೆಗೆ ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2019-08-16 15:26 GMT

ಶಂಕರನಾರಾಯಣ, ಆ.16: ರಸ್ತೆಗೆ ಅಡ್ಡ ಬಂದ ಜಿಂಕೆಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಂಪಾರು ಗ್ರಾಮದ ಪಟೇಲರ ಮನೆ ಸಮೀಪ ಆ.15ರಂದು ಸಂಜೆ  ನಡೆದಿದೆ.

ಮೃತರನ್ನು ಶಂಕರ ಎಂದು ಗುರುತಿಸಲಾಗಿದೆ. ವಾಲ್ತೂರು ಕಡೆಯಿಂದ ಅಂಪಾರು ಕಡೆಗೆ ಹೋಗುತ್ತಿದ್ದ ಬೈಕ್ ಅಕಸ್ಮಾತ್ ರಸ್ತೆಗೆ ಅಡ್ಡ ಬಂದ ಜಿಂಕೆಗೆ ಡಿಕ್ಕಿ ಹೊಡೆದು, ನಂತರ ಹತೋಟಿ ತಪ್ಪಿರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಶಂಕರ್ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News