ಸಾತ್ವಿಕ್‌ಸಾಯಿರಾಜ್-ಚಿರಾಗ್ ಅಲಭ್ಯ

Update: 2019-08-16 18:15 GMT

ಬಾಸೆಲ್, ಆ.16: ಥಾಯ್ಲೆಂಡ್ ಓಪನ್ ಚಾಂಪಿಯನ್ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸ್ವಿಟ್ಝರ್ಲೆಂಡ್‌ನ ಬಾಸೆಲ್‌ನಲ್ಲಿ ಆ.19ರಿಂದ ಆರಂಭವಾಗಲಿರುವ ವರ್ಲ್ಡ್‌ಚಾಂಪಿಯನ್‌ಶಿಪ್‌ನಲ್ಲಿ ಗಾಯದ ಕಾರಣದಿಂದಾಗಿ ಹೊರಗುಳಿಯಲಿದ್ದಾರೆ.

ಸಾತ್ವಿಕ್‌ಸಾಯಿರಾಜ್ ಭುಜನೋವಿನ ಸಮಸ್ಯೆ ಮತ್ತು ಚಿರಾಗ್ ಕಿಬ್ಬೊಟ್ಟೆ ನೋವಿನ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕಾರಣದಿಂದಾಗಿ ಇವರು ವರ್ಲ್ಡ್‌ಚಾಂಪಿಯನ್‌ಶಿಪ್‌ನಿಂದ ಹೊರಗು ಳಿಯುವ ನಿರ್ಧಾರ ಕೈಗೊಂಡಿದ್ದಾರೆ.

ಭಾರತದ ಮಿಕ್ಸೆಡ್ ಡಬಲ್ಸ್ ಆಟಗಾರರಾದ ಪ್ರಣವ್ ಜೆರ್ರಿ ಚೋಪ್ರಾ ಮತ್ತು ಎನ್. ಸಿಕ್ಕಿರೆಡ್ಡಿ ಗಾಯದ ಕಾರಣದಿಂದಾಗಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಆದರೆ ಸಿಕ್ಕಿ ರೆಡ್ಡಿ 2011ರಲ್ಲಿ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಪಡೆದ ಅಶ್ವಿನಿ ಪೊನ್ನಪ್ಪ ಜೊತೆ ಮಹಿಳೆಯರ ಡಬಲ್ಸ್ ನಲ್ಲಿ ಆಡಲಿದ್ದಾರೆ.

ಶ್ರೀಕಾಂತ್‌ಗೆ ಫಿಟ್ನೆಸ್ ಸಮಸ್ಯೆ: ಕೆ.ಶ್ರೀಕಾಂತ್ ಫಿಟ್ನೆಸ್ ಸಮಸ್ಯೆಯಿಂದ ಹೊರಬಂದಿಲ್ಲ. ಅವರು ಗಾಯದಿಂದ ಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ವರ್ಲ್ಡ್ ನಂ.14 ಆಟಗಾರ ಸಮೀರ್ ವರ್ಮಾ ಭಾರತದ ಈಗಿನ ಉತ್ತಮ ಸಿಂಗಲ್ಸ್ ಆಟಗಾರ. ಆದರೆ ಅವರಿಗೂ ಗಾಯದ ಸಮಸ್ಯೆ ಎದುರಾಗಿದೆ. ಮಹಿಳೆಯರ ಸಿಂಗಲ್ಸ್‌ನಲ್ಲಿ ಭಾರತದ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್ ಅವರಿಗೆ ಈಗ ಯಾವುದೇ ಸಮಸ್ಯೆ ಇಲ್ಲ. ಈ ಕಾರಣದಿಂದಾಗಿ ಇವರಿಂದ ಪದಕ ನಿರೀಕ್ಷಿಸಲಾಗಿದೆ. ಅವರು ಕೊರಿಯಾದ ಕೋಚ್ ಹಾಗೂ ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನ ಜಯಿಸಿದ ಕಿಮ್ ಜಿ ಹ್ಯೂನ್ ಮಾರ್ಗದರ್ಶನದಲ್ಲಿ ತಯಾರಿ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News