ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

Update: 2019-08-16 18:37 GMT

ಮಂಡ್ಯ, ಆ.16: ವಿಷ ಸೇವಿಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ನೀಲಗಿರಿ ತೋಟದಲ್ಲಿ ನಡೆದಿದೆ.

ಮಳವಳ್ಳಿ ಶಾಂತಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಓದುತ್ತಿರುವ ವಿದ್ಯಾರ್ಥಿ ದಾಸನದೊಡ್ಡಿ ಗ್ರಾಮದ ಮಾದೇಗೌಡರ ಪುತ್ರ ಮಹದೇವಸ್ವಾಮಿ ಆತ್ಮಹತ್ಯೆ ಮಾಡಿಕೊಂಡವ.

ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದ ವಿದ್ಯಾರ್ಥಿ ಊರಿಗೆ ತೆರಳುವಾಗ ಮಾರ್ಗ ಮಧ್ಯದಲ್ಲಿರುವ ಬಾಚನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ನೀಲಗಿರಿ ತೋಟದಲ್ಲಿ ಕ್ರಿಮಿನಾಶಕ ಔಷಧ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮೃತಪಟ್ಟ ಜಾಗದಲ್ಲಿ ಒಂದು ಕಾಗದ ಸಿಕ್ಕಿದ್ದು ಅದರಲ್ಲಿ 'ಸುತ್ತ ಇರುವ ನೀಲಗಿರಿ ಮರದಲ್ಲಿ ನಾನು' ಎಂದು ಬರೆದಿದೆ ಎಂದು ತಿಳಿದು ಬಂದಿದೆ.
ಮಳವಳ್ಳಿ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News