ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ವೇಳೆ ಎಡವಟ್ಟು: ದೃಷ್ಟಿ ಕಳೆದುಕೊಂಡ 11 ರೋಗಿಗಳು

Update: 2019-08-17 10:36 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ, ಆ.17: ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ವೇಳೆ ನಡೆದ ಎಡವಟ್ಟಿನಿಂದ 11 ಜನರು ತಮ್ಮ ದೃಷ್ಟಿಯನ್ನೇ ಕಳೆದುಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್ ನ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಈ 11 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. 72 ಗಂಟೆಗಳೊಳಗೆ ಈ ಬಗ್ಗೆ ವರದಿ ನೀಡಬೇಕೆಂದು ಆದೇಶಿಸಲಾಗಿದೆ.

“ಆಸ್ಪತ್ರೆಯ ಲೈಸೆನ್ಸ್ ರದ್ದುಗೊಳಿಸಲು ನಾನು ಸೂಚನೆ ನೀಡಿದ್ದೇನೆ. ರೋಗಿಗಳಿಗೆ 20 ಸಾವಿರ ರೂ. ಪರಿಹಾರ ನೀಡಲಾಗುವುದು” ಎಂದು ಮಧ್ಯಪ್ರದೇಶ ಆರೋಗ್ಯ ಸಚಿವ ತುಳಸಿ ಸಿಲಾವತ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News