ಕಾರ್ಖಾನೆಯಲ್ಲಿ ಬೆಂಕಿ: ಉಸಿರುಗಟ್ಟಿ ಕಾರ್ಮಿಕ ಸಾವು

Update: 2019-08-17 15:58 GMT

ಬೆಂಗಳೂರು, ಆ.17: ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಇಲ್ಲಿನ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಮುರಾದ್ ಮೃತ ಕಾರ್ಮಿಕ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಡಿಜೆ ಹಳ್ಳಿಯ 6ನೇ ಮುಖ್ಯರಸ್ತೆಯ ಕುಶನ್ ನಿರ್ಮಿತ ಕಾರ್ಖಾನೆಯಲ್ಲಿ ಶುಕ್ರವಾರ ರಾತ್ರಿ ದಿಢೀರ್ ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಬೆಂಕಿ ಕಾಣಿಸಿ ಕೊಂಡು ಹೊಗೆ ಆವರಿಸಿಕೊಂಡಿದೆ. ಈ ವೇಳೆ ನಿದ್ದೆಯಲ್ಲಿದ್ದ ನಾಲ್ಕು ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಆದರೆ, ಮುರಾದ್ ಅಲ್ಲಿ ಉಳಿದುಕೊಂಡಿದ್ದ ಪರಿಣಾಮ, ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಡಿಜೆ ಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News