ಆ.19 ರಿಂದ ಜಿಲ್ಲಾವಾರು ಜೆಡಿಎಸ್ ಮುಖಂಡರ ಸಭೆ

Update: 2019-08-17 16:11 GMT

ಬೆಂಗಳೂರು, ಆ.17: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆ.19 ರಿಂದ 24ರವರೆಗೆ ಜಿಲ್ಲಾವಾರು ಜೆಡಿಎಸ್ ಮುಖಂಡರ ಸಭೆಯನ್ನು ಪಕ್ಷದ ಕಚೇರಿ(ಜೆ.ಪಿ.ಭವನ)ಯಲ್ಲಿ ಕರೆದಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಆ.19ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕಬಳ್ಳಾಪುರ, ಮಧ್ಯಾಹ್ನ 3 ಗಂಟೆಗೆ ಕೋಲಾರ, ಆ.20ರಂದು ಬೆಳಗ್ಗೆ 11 ಗಂಟೆಗೆ ಮಂಡ್ಯ, ಮಧ್ಯಾಹ್ನ 3 ಗಂಟೆಗೆ ರಾಮನಗರ, ಆ.21ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರ, ಮಧ್ಯಾಹ್ನ 3 ಗಂಟೆಗೆ ಮೈಸೂರು.

ಆ.22ರಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ, ಮಧ್ಯಾಹ್ನ 3 ಗಂಟೆಗೆ ದಾವಣಗೆರೆ, ಆ.23ರಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿ, ಮಧ್ಯಾಹ್ನ 3 ಗಂಟೆಗೆ ಕೊಪ್ಪಳ, ಸಂಜೆ 5 ಗಂಟೆಗೆ ಬೀದರ್, ಆ.24ರಂದು ಬೆಳಗ್ಗೆ 11 ಗಂಟೆಗೆ ತುಮಕೂರು, ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ಗ್ರಾಮಾಂತರ ಹಾಗೂ ಸಂಜೆ 4 ಗಂಟೆಗೆ ಬೆಂಗಳೂರು ನಗರ ಜಿಲ್ಲೆಯ ಮುಖಂಡರ ಸಭೆಯನ್ನು ಕರೆಯಲಾಗಿದೆ.

ಈ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಕ್ಷೇತ್ರ, ತಾಲೂಕು ಅಧ್ಯಕ್ಷರು, ಪಕ್ಷದ ಮುಖಂಡರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಸಂಸದರು, ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು, ರಾಜ್ಯ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು. 2018ರ ಸಾರ್ವತ್ರಿಕ ವಿಧಾನಸಭಾ ಹಾಗೂ 2019ರ ಸಾರ್ವತ್ರಿಕ ಲೋಕಸಭಾ ಮತ್ತು ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ತಪ್ಪದೇ ಭಾಗವಹಿಸುವಂತೆ ದೇವೇಗೌಡ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News