ಮರಕ್ಕೆ ಬೈಕ್ ಢಿಕ್ಕಿ: ವ್ಯಕ್ತಿ ಮೃತ್ಯು
Update: 2019-08-17 17:05 GMT
ಬೆಂಗಳೂರು, ಆ.17: ಬೈಕ್ನಲ್ಲಿ ದಂಪತಿ ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪತಿ ಮೃತಪಟ್ಟಿರುವ ಘಟನೆ ಇಲ್ಲಿನ ಆರ್ಟಿ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಾಗಶೆಟ್ಟಿಹಳ್ಳಿ ನಿವಾಸಿ ಗಣೇಶ್ ಕೃಷ್ಣ ಮೃತ ವ್ಯಕ್ತಿಯಾಗಿದ್ದು, ಇವರ ಪತ್ನಿ ನಂದಿನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಗಣೇಶ್, ಪತ್ನಿಯನ್ನು ಕರೆದುಕೊಂಡು ಮನೆಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ, ಶನಿವಾರ ಮುಂಜಾನೆ ಇಲ್ಲಿನ ಸಂಜಯ್ನಗರ ಮುಖ್ಯರಸ್ತೆಯ ಪೊಲೀಸ್ ಠಾಣೆ ಸಮೀಪ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಮರಕ್ಕೆ ಅಪ್ಪಳಿಸಿದ ಪರಿಣಾಮ ಗಣೇಶ್, ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.