ಅರುಣ್ ಜೇಟ್ಲಿಯವರನ್ನು ಭೇಟಿ ಮಾಡಿದ ಕೇಜ್ರಿವಾಲ್, ಸ್ಮೃತಿ ಇರಾನಿ

Update: 2019-08-18 15:00 GMT

ಹೊಸದಿಲ್ಲಿ, ಆ.18: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಹಾಗೂ ರಾಮ ವಿಲಾಸ್ ಪಾಸ್ವಾನ್ ಸೇರಿದಂತೆ ಅನೇಕ ನಾಯಕರು ಎಐಐಎಂಎಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ರವಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಜೇಟ್ಲಿಯವರನ್ನು ಆಗಸ್ಟ್ 9ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್)ಗೆ ದಾಖಲಿಸಲಾಗಿತ್ತು. ಹಿಮಾಚಲ ಪ್ರದೇಶದ ರಾಜ್ಯಪಾಲ ಕಾಲರಾಜ್ ಮಿಶ್ರಾ, ಸಂಘಪರಿವಾರದ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಕೃಷ್ಣ ಗೋಪಾಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್ ಅವರೂ ರವಿವಾರ ಜೇಟ್ಲಿಯವರನ್ನು ಆಸ್ಪತ್ರೆಯಲ್ಲಿ ಭೇಟಿಯಾದರು. ಜೇಟ್ಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ಹರ್ಷ ವರ್ಧನ್, ಸದ್ಯ ಆಸ್ಪತ್ರೆಯ ವೈದ್ಯರು ತಮ್ಮ ಕೈಲಾಗುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News