ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಯವಕನ ರಕ್ಷಣೆ

Update: 2019-08-18 17:36 GMT

ಮಂಗಳೂರು: ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಲು ಯತ್ನಿಸುತ್ತಿದ್ದ ಯುವಕ ಬಂಟ್ವಾಳ ನಿವಾಸಿ ಕೌಶಿಕ್ ನನ್ನು ಸ್ಥಳೀಯರು ರವಿವಾರ ರಾತ್ರಿ ರಕ್ಷಿಸಿದ್ದಾರೆ.

ನದಿಗೆ ಹಾರಲು ಯತ್ನಿಸುತ್ತಿದ್ದಾಗ ಅಲ್ಲಿದ್ದ ಸ್ಥಳೀಯರು ಆತನನ್ನು ವಿಚಾರಿಸಿದ್ದಾರೆ. ಆಗ ಆತ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿರುವ ವಿಚಾರ ಗೊತ್ತಾಗಿದೆ. ತಕ್ಷಣ ಕಂಕನಾಡಿ ನಗರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಠಾಣೆಗೆ ಕರದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಸ್ಥಳದಲ್ಲಿ ಈ ಸಂದರ್ಭ ಕುತೂಹಲಿಗಳು ಸೇರಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪೊಲೀಸರು ಆಗಮಿಸಿ ಜನರನ್ನು ಚದುರಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News