ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

Update: 2019-08-18 18:29 GMT

ಮಡಿಕೇರಿ ಆ.18 : ವಿದ್ಯುತ್ ಸ್ಪರ್ಶಿಸಿ ನಾಗರಹೊಳೆ ರಕ್ಷಿತಾರಣ್ಯಕ್ಕೆ ಸೇರಿದ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ದಕ್ಷಿಣಕೊಡಗಿನ ಕೆ.ಬಾಡಗ ಗ್ರಾಮದ ತೋಟವೊಂದರಲ್ಲಿ ನಡೆದಿದೆ.

ಎರ್ಮಾಡು ಎಂಬಲ್ಲಿನ ತೋಟಕ್ಕೆ ಶನಿವಾರ ರಾತ್ರಿ ಗಂಡಾನೆ ಪ್ರವೇಶಿಸಿದ್ದು, ಈ ಸಂದರ್ಭ ವಿದ್ಯುತ್ ಸ್ಪರ್ಷಗೊಂಡಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಮಹಜರು ಮತ್ತು ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News