ಇಂದು ಕೆಪಿಸಿಸಿ ಪ್ರಕೃತಿ ವಿಕೋಪ ಪರಿಶೀಲನಾ ತಂಡ ಪುತ್ತೂರಿಗೆ ಭೇಟಿ

Update: 2019-08-18 18:51 GMT

ಪುತ್ತೂರು: ಕೆಪಿಸಿಸಿಯಿಂದ ನೇಮಕಗೊಂಡಿರುವ ಪ್ರಕೃತಿ ವಿಕೋಪ ಪರಿಶೀಲನಾ ತಂಡ ಆ.19ರಂದು ಅಪರಾಹ್ನ ಪುತ್ತೂರಿಗೆ ಆಗಮಿಸಿ ಕಾಂಗ್ರೆಸ್ ಕಚೇರಿ ಹಾಗೂ ಪ್ರಕೃತಿ ವಿಕೋಪಕ್ಕೆ ಒಳಗಾದ ಸ್ಥಳಗಳಿಗೆ ಭೇಟಿ ನೀಡಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು ಅವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಮಾಜಿ ಸಚಿವ ರಮನಾಥ್ ರೈ ಅವರ ನೇತೃತ್ವದ ತಂಡದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಸಚಿವರಾದ ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್.ಡಿ.ಸೋಜಾ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಹರೀಶ್‍ಕುಮಾರ್, ಜಿಲ್ಲಾ ಯುವಕ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ. 

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ, ಜಿಲ್ಲಾ ಮತ್ತು ಕ್ಷೇತ್ರ ಸಮಿತಿಯ ಎಲ್ಲಾ ಘಟಕಗಳ ಪದಾಧಿಕಾರಿಗಳು, ಪುತ್ತೂರು ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಪದಾಧಿಕಾರಿಗಳು , ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News