ಗೋಳ್ತಮಜಲು: ಉಚಿತ ಹಿಜಾಮ ಚಿಕಿತ್ಸಾ ಶಿಬಿರ

Update: 2019-08-19 06:49 GMT

ವಿಟ್ಲ ಆ.19: ಹಜಾಜ್ ಸ್ಪೋರ್ಟ್ಸ್ ಕ್ಲಬ್  ಗೋಳ್ತಮಜಲು ಇದರ ಆಶ್ರಯದಲ್ಲಿ 'ಆಯುಷ್ ವಿಭಾಗ' ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ಹಿಜಾಮ ಚಿಕಿತ್ಸಾ ಶಿಬಿರವು ರವಿವಾರ ಗೋಳ್ತಮಜಲ್ ನ ಹಜಾಜ್ ಸ್ಪೋರ್ಟ್ಸ್ ಕ್ಲಬ್ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಮಾತನಾಡಿ, ಪ್ರತಿಯೊಂದು ಚಿಕಿತ್ಸೆಗೂ ಅದರದ್ದೇ ಆದ ಮಹತ್ವವಿದ್ದು, ಈ ಪೈಕಿ ಹಿಜಾಮ ಚಿಕಿತ್ಸೆಯು ಅತ್ಯಂತ ಪರಿಣಾಮಕಾರಿ ಹಾಗೂ ಉಪಯುಕ್ತ ಚಿಕಿತ್ಸೆಯಾಗಿದೆ ಎಂದರು. 

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆ, ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಮುದರ್ರಿಸ್ ಶೇಖ್ ಮುಹಮ್ಮದ್ ಇರ್ಫಾನಿ ಫೈಝಿ ಅಲ್ ಅಝ್ಹರಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಮಾತನಾಡಿ ಶುಭ ಹಾರೈಸಿದರು.

ಹಜಾಜ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಹಾಜಿ ಜಿ.ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು.                    

ಕಲ್ಲಡ್ಕ ಜುಮಾ ಮಸೀದಿಯ ಸದಸ್ಯ ಹಾಜಿ ಜಿ.ಯೂಸುಫ್ ಗೋಳ್ತಮಜಲು, ಕಲ್ಲಡ್ಕ ಝಮಾನ್ ಬಾಯ್ಸ್ ಸಲಹೆಗಾರ ಫಾರೂಕ್ ಐ.ಎನ್., ಕಲ್ಲಡ್ಕ ಸೆಂಚುರಿ ಕ್ರಿಕೆಟರ್ಸ್ ಅದ್ಯಕ್ಷ  ಮೋಹನ್, ಟಿಕ್ಕಾ ಪಾಯಿಂಟ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಮಾಜಿ ಅಧ್ಯಕ್ಷ ಫಾರೂಕ್, ಡಾ. ಅಸ್ಗತುಲ್ಲಾ, ನಿಶಾದ್ ಎಮ್ಮೆಕೆರೆ, ಎನ್.ಎಂ.ಸಿ. ನ್ಯೂಸ್ ಡೈರೆಕ್ಟರ್ ಜಾಸಿಮ್, ನ್ಯಾಯವಾದಿ ಅಸ್ಗರ್ ಮುಡಿಪು ಮೊದಲಾದವರು ಉಪಸ್ಥಿತರಿದ್ದರು.

188 ಮಂದಿ ಹಿಜಾಮ ಚಿಕಿತ್ಸೆಯ ಪ್ರಯೋಜನವನ್ನು ಪಡೆದುಕೊಂಡರು. ಇದೇ ವೇಳೆ ನೆರೆ ಸಂತ್ರಸ್ತರಿಗಾಗಿ ನಿಧಿ ಸಂಗ್ರಹಿಸಲಾಯಿತು.

ಹಜಾಜ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಇಮ್ತಿಯಾಝ್ ಸ್ವಾಗತಿಸಿದರು. ಶಿಹಾಬುದ್ದೀನ್ ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News