​ಗೃಹರಕ್ಷಕ ದಳದ ಸಿಬ್ಬಂದಿಗೆ ನೆರವು

Update: 2019-08-19 13:03 GMT

ಮಂಗಳೂರು,ಆ.19: ದ.ಕ. ಜಿಲ್ಲಾ ಗೃಹರಕ್ಷಕ ದಳದ ಬೆಳ್ತಂಗಡಿ ಘಟಕದ ಸಿಬ್ಬಂದಿ ಶಿವಾಕ್ಷ ಅವರ ಹೊಸದಾಗಿ ನಿರ್ಮಿಸಿದ ಮನೆ ಭಾರೀ ಮಳೆಯಿಂದ ಭಾಗಶ: ಹಾನಿಯಾಗಿತ್ತು. ಆ ಹಿನ್ನೆಲೆಯಲ್ಲಿ ದ.ಕ. ಗೃಹರಕ್ಷಕದ ದಳದ ಅಧಿಕಾರಿ-ಸಿಬ್ಬಂದಿ ವರ್ಗವು ಸಂಗ್ರಹಿಸಿದ 11,111 ರೂ. ಮೊತ್ತ ಮತ್ತು 25 ಕೆ.ಜಿ. ಅಕ್ಕಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭ ಜಿಲ್ಲಾ ಸಮಾದೇಷ್ಠ ಡಾ. ಮುರಲಿ ಮೋಹನ್ ಚೂಂತಾರು ಹಾಗೂ ಉಪ ಸಮಾದೇಷ್ಠ ರಮೇಶ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News