ಸಾಲಿಡಾರಿಟಿ ಯೂತ್ ಮೂವ್‍ಮೆಂಟ್ ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ವತಿಯಿಂದ ನೆರೆ ಸಂತ್ರಸ್ಥರಿಗೆ ನೆರವು

Update: 2019-08-19 13:33 GMT

ಉಳ್ಳಾಲ: ಸಾಲಿಡಾರಿಟಿ ಯೂತ್ ಮೂವ್‍ಮೆಂಟ್ ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಇದರ ಆಶ್ರಯದಲ್ಲಿ ಕೊಡಗು ನೆರೆ ಸಂತ್ರಸ್ಥರಿಗೆ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸುವ ಕಾರ್ಯಕ್ರಮ ತೊಕ್ಕೊಟ್ಟುವಿನಲ್ಲಿ ಸೋಮವಾರ ನಡೆಯಿತು. ಮಂಗಳೂರು ವಿವಿ ಇತಿಹಾಸ ವಿಭಾಗದ ಪ್ರೊಫೆಸರ್ ಹನುಮಾನ್ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಜಮಾಅತೆ ಇಸ್ಲಾಮಿ ಹಿಂದ್ ವಲಯ ಸಂಚಾಲಕ ಅಬ್ದುಲ್ ಸಲಾಂ, ವಲಯ ಕಾರ್ಯದರ್ಶಿ ಇಲ್ಯಾಸ್, ಜಮಾಅತೆ ಇಸ್ಲಾಮಿ ಹಿಂದ್ ಸ್ಥಾನೀಯ ಅಧ್ಯಕ್ಷ ಅಬ್ದುಲ್ ಕರೀಂ, ಕಾರ್ಯದರ್ಶಿ ಮುಝಮ್ಮಿಲ್ ಅಹ್ಮದ್ ಮತ್ತು ಸಂಘಟನಾ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News