ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ

Update: 2019-08-19 17:00 GMT

ಬೆಂಗಳೂರು, ಆ.19: ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ.

2018ರ ಆಗಸ್ಟ್ 1 ರಿಂದ ಈ ವರೆಗಿನ ಅವಧಿಗೆ ನಡೆದಿರಬಹುದಾದ ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು, ಅವರ ಬಂಧು-ಮಿತ್ರರ ಹಾಗೂ ಸರಕಾರಿ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News