ರೈತ ಸಂಘದ ಗ್ರಾಮ ಸಮಿತಿ ಉದ್ಘಾಟನೆ

Update: 2019-08-19 17:23 GMT

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಉರುವಾಲು, ಕಣಿಯೂರು ಗ್ರಾಮಗಳ ವಲಯ ಸಮಿತಿಯನ್ನು ಉದ್ಘಾಟಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ನಿರಂಜನ ಭಾವಂತಬೆಟ್ಟು, ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ರೂಪೇಶ್ ರೈ ಅಲಿಮಾರ್, ಚಿದಾನಂದ ರಾವ್, ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಕಲೀಲ್ ಪುಂಚಪ್ಪಾಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸತ್ಯಶಂಕರ್ ಭಟ್, ಪುತ್ತೂರು ತಾಲೂಕು ಅಧ್ಯಕ್ಷ ಬಾಲಸುಬ್ರಹ್ಮಣ್ಯ ಹೊಳ್ಳ, ನೂತನ ಸಮಿತಿಯ ಅಧ್ಯಕ್ಷ ರತ್ನಾಕರ ಆರಲಿಕ್ಕೆ, ಉಪಾಧ್ಯಕ್ಷ ತಿಮ್ಮಪ್ಪ ಸಾಲ್ಯಾನ್, ಕಾರ್ಯದರ್ಶಿ ಯೋಗೀಶ್ ಆಚಾರ್ಯ, ಸಂಘಟನಾ ಅಧ್ಯಕ್ಷ ಶಿವಪ್ರಸಾದ್ ನೀಲ್ಚಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News